ಹೊಸ ದಿಗಂತ ವರದಿ,ಮಂಡ್ಯ :
ಮಳವಳ್ಳಿ ತಾಲ್ಲೂಕಿನ ಪಂಡಿತಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-209ರಲ್ಲಿ ಬುಧವಾರ ಬೆಳಿಗ್ಗೆ ಬೈಕ್ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರಿಬ್ಬರು ಮೃತಪಟ್ಟಿದ್ದಾರೆ.
ಮಳವಳ್ಳಿ ತಾಲ್ಲೂಕಿನ ಮಂಚನಹಳ್ಳಿ ಗ್ರಾಮದ ನಾಗಸ್ವಾಮಿ (45) ಮತ್ತು ದೊಡ್ಡಮಾದಯ್ಯ(65) ಮೃತಪಟ್ಟ ಬೈಕ್ ಸವಾರರು. ಮೃತ ಸವಾರಿಬ್ಬರು ಸ್ವಗ್ರಾಮ ಮಂಚನಹಳ್ಳಿಯಿಂದ ಮಳವಳ್ಳಿ ಕಡೆಗೆ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ-209ರಲ್ಲಿ ಬೆಂಗಳೂರಿನಿಂದ ಕೊಳ್ಳೇಗಾಲದ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ನಾಗಸ್ವಾಮಿ, ದೊಡ್ಡಮಾದಯ್ಯ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯಿಂದ ಕೆಲಕಾಲ ರಾಷ್ಟ್ರೀಯ ಸಂಚಾರ ಅಸ್ತವ್ಯಸ್ತವಾಗಿತ್ತು.
ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಡಿವೈಎಸ್ ಪಿ.ವಿ.ಕೃಷ್ಣಪ್ಪ, ಗ್ರಾಮಾಂತರ ಪಿಎಸ್ಐ ಶ್ರವಣದಾಸರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.