ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಆರ್ಥಿಕ ಬಿಕ್ಕಟ್ಟಿನಿಂದ ದಿನೇ ದಿನೇ ಕಂಗೆಟ್ಟಿರುವ ಶ್ರೀಲಂಕಾ ದೇಶಕ್ಕೆ ಅಗತ್ಯ ಪರಿಹಾರ ಸಾಮಗ್ರಿಗಳನ್ನು ರವಾನಿಸುವ ಕುರಿತಾಗಿ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಮೂರು ದಿನಗಳ ದೆಹಲಿ ಪ್ರವಾಸದಲ್ಲಿ ಡಿಎಂಕೆ ಅಧ್ಯಕ್ಷ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ , ಇಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು. ಈ ವೇಳೆ ಶ್ರೀಲಂಕಾದ ಆರ್ಥಿಕ ಸಂಕಷ್ಟದ ಬಗ್ಗೆ ಚರ್ಚಿಸಿದ್ದಾರೆ.
ತಮಿಳುನಾಡಿನಿಂದ ಶ್ರೀಲಂಕಾಕ್ಕೆ ಆಹಾರ ಮತ್ತು ವೈದ್ಯಕೀಯ ಸಾಮಗ್ರಿಗಳ ರವಾನಿಸುವ ಬಗ್ಗೆ ಪ್ರಸ್ತಾವನೆ ಮುಂದಿಟ್ಟಿದ್ದಾರೆ.
ಇದಾದ ಬಳಿಕ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ತಮಿಳುನಾಡು ಸಿಎಂ ಭೇಟಿಯಾದರು. ಗೃಹ ಸಚಿವ ಅಮಿತ್ ಶಾ ಅವರನ್ನೂ ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.