ಪ್ರಯಾಣಿಕರೇ ಗಮನಿಸಿ…ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ RTPCR ಕಡ್ಡಾಯವಲ್ಲ!

ಹೊಸದಿಗಂತ ಡಿಜಿಟಲ್ ಡೆಸ್ಕ್

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದು, ಈ ಹಿನ್ನೆಲೆ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಆರ್ ಟಿ ಪಿ ಸಿ ಆರ್ ವರದಿಯ ಅಗತ್ಯವಿಲ್ಲ ಆದರೆ ಲಸಿಕೆ ಪಡೆದ ಪ್ರಮಾಣ ಪತ್ರ ಕಡ್ಡಾಯವಾಗಿದೆ ಎಂದು ರಾಜ್ಯ ಸರಕಾರ ತಿಳಿಸಿದೆ.
ಈ ಕುರಿತು ಟ್ವಿಟರ್ ಮೂಲಕ ರಾಜ್ಯ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದು, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ, ಎಲ್ಲಾ ರೀತಿಯ ಸಾರಿಗೆ ವಿಧಾನಗಳ ಮೂಲಕ ( ಬಸ್ಸು, ವಿಮಾನ, ರೈಲು, ಖಾಸಗಿ ವಾಹನ) ಬರುವವರಿಗೆ ಆರ್ ಟಿಪಿಸಿಆರ್ ವರದಿಯ ಅಗತ್ಯವಿಲ್ಲ.
ಆದರೆ ಕೊರೊನಾ ಲಸಿಕೆ ಪಡೆದ ಪ್ರಮಾಣಪತ್ರ ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!