ಕೃಷ್ಣ ನದಿ ತೀರದ ಗ್ರಾಮಸ್ಥರಿಗೆ ನಡುಕ ಹುಟ್ಟಿಸಿದ ಬೃಹತ್‌ ಗಾತ್ರದ ಮೊಸಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳವಾಡ ಗ್ರಾಮದಲ್ಲಿ ನಡು ರಸ್ತೆಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡಿದೆ.

ಬಡವಾಡ ಹರೋಲಿ ತೋಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ಸರಿ ಸುಮಾರು ಹತ್ತು ಅಡಿಯಷ್ಟು ಉದ್ದದ ಮೊಸಳೆ ಪ್ರತ್ಯಕ್ಷವಾಗಿದೆ.

ರಾತ್ರಿ ಹೊತ್ತು ಹಳ್ಳದ ರಸ್ತೆ ಮೇಲೆ ಮೊಸಳೆ ಕಾಣಿಸಿಕೊಳ್ಳುತ್ತಿದ್ದು, ಕೃಷ್ಣಾ ನದಿ ಪ್ರವಾಹ ಬಂದು ಹೋದ ಮೇಲೆ ನದಿ ತೀರದ ಗ್ರಾಮಸ್ಥರಲ್ಲಿ ಮೊಸಳೆ ಆತಂಕ ಹೆಚ್ಚಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!