ತಿಹಾರ ಜೈಲಿನಲ್ಲೇ ವಿಚಾರಣೆ: ಸಿಬಿಐ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಬಿಆರ್‌ಎಸ್‌ ನಾಯಕಿ ಕವಿತಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಿಹಾರ ಜೈಲಿನಲ್ಲಿ ತಮ್ಮನ್ನು ವಿಚಾರಣೆಗೆ ಒಳಪಡಿಸುವುದಾಗಿ ಸಿಬಿಐ ಸಲ್ಲಿಸಿರುವ ಅರ್ಜಿ ವಿರುದ್ಧ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರು ಶನಿವಾರ ದೆಹಲಿಯ ನ್ಯಾಯಾಲಯವೊಂದರ ಮೆಟ್ಟಿಲೇರಿದ್ದಾರೆ.‌

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕವಿತಾ ತಿಹಾರ ಜೈಲಿನಲ್ಲಿದ್ದಾರೆ. ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಸಿಬಿಐ ಮನವಿ ಸಲ್ಲಿಸಿತ್ತು. ಅದರಂತೆ, ತಿಹಾರ ಜೈಲಿನಲ್ಲಿಯೇ ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಲು ನ್ಯಾಯಾಲಯವು ಸಿಬಿಐಗೆ ಶುಕ್ರವಾರ ಅನುಮತಿ ನೀಡಿತ್ತು.

ಇದರ ಬೆನ್ನಲ್ಲೇ ಕವಿತಾ ಪರ ವಕೀಲ ಅರ್ಜಿ ಸಲ್ಲಿಸಿದ್ದು, ಸಿಬಿಐ ಕಾನೂನು ಪ್ರಕ್ರಿಯೆಗೆ ಅಡ್ಡಿಪಡಿಸುತ್ತಿದೆ ಎಂದು ನ್ಯಾಯಾಲಯದಲ್ಲಿ ಹೇಳಿದರು. ಜೊತೆಗೆ, ಕವಿತಾ ಅವರ ಅರ್ಜಿ ವಿಚಾರಣೆ ನಡೆಯುವವರೆಗೆ ಸಿಬಿಐನ ಅರ್ಜಿಗೆ ಸಂಬಂಧಿಸಿ ಆದೇಶ ನೀಡದಂತೆ ಮನವಿ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!