ಹೊಸದಿಗಂತ ವರದಿ, ಉಡುಪಿ:
ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಕೊಲೆಯಾದ ಪ್ರವೀಣ್ ನೆಟ್ಟಾರು ಅವರಿಗೆ ಶ್ರದ್ದಾಂಜಲಿ ಸೂಚಕವಾಗಿ ನಗರದ ಕೊಡವೂರು ವಾರ್ಡಿನ ಎಲ್ಲಾ ವರ್ತಕರು ತಮ್ಮ ಅಂಗಡಿಗಳನ್ನು ಶನಿವಾರ ಬೆಳ್ಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಬಂದ್ ಮಾಡಿ ಶ್ರದ್ದಾಂಜಲಿ ಅರ್ಪಿಸಿದರು.
ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೋಲಿಸ್ ಬಂದೋಬಸ್ತ್ ನೀಡಲಾಗಿತ್ತು. ಆದರೆ ಬಂದ್ ಯಶಸ್ವಿಯಾಗಿದ್ದು, ಶಾಂತಿಯುತವಾಗಿ ಮುಗಿದಿದೆ.