ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ರಾಜ್ಯಕ್ಕೆ ಬಂದಿಳಿದ ಪ್ರಧಾನಿ ಮೋದಿಯವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ.
ಶಿವಮೊಗ್ಗದಲ್ಲಿ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಅಡಿಕೆ ಹಾರ, ಪೇಟ ತೊಡಿಸಿ ಸನ್ಮಾನಿಸಿದರು. ಜೊತೆಗೆ ಶ್ರೀಗಂಧದಿಂದ ತಯಾರಿಸಿದ ಶಿವಮೊಗ್ಗ ವಿಮಾನ ನಿಲ್ದಾಣದ ಸ್ಮರಣಿಕೆಯನ್ನು ಪ್ರಧಾನಿ ಮೋದಿಯವರಿಗೆ ಕೊಟ್ಟು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಬಿ.ಎಸ್ಯಡಿಯೂರಪ್ಪರಿಗೆ ಹಸ್ತಲಾಘವ ಮಾಡಿ ಆತ್ಮೀಯವಾಗಿ ಮಾತನಾಡಿದರು.