ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು-ಕಾಶ್ಮೀರದ ಫೊಂಚ್ ಜಿಲ್ಲೆಯಲ್ಲಿ ನಿನ್ನೆ ಉಗ್ರರ ದಾಳಿಯಿಂದ ಹುತಾತ್ಮರಾದ ಐವರು ಯೋಧರ ಪಾರ್ಥಿವ ಶರೀರಕ್ಕೆ ಶುಕ್ರವಾರ ಸೇನಾ ಸಿಬ್ಬಂದಿ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಲಾಯಿತು.
ಸೇನಾ ಹಿರಿಯ ಅಧಿಕಾರಿಗಳು ಮತ್ತು ನಾಗರಿಕ ಆಡಳಿತ ಸೇವೆಯ ಅಧಿಕಾರಿಗಳು ಹುತಾತ್ಮ ಯೋಧರಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಹುತಾತ್ಮರಾದ ಪಂಜಾಬಿನ ನಾಲ್ವರು ಯೋಧರ ಕುಟುಂಬಗಳಿಗೆ ರೂ. 1 ಕೋಟಿ ಪರಿಹಾರವನ್ನು ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದಾರೆ.