ಹೊಸದಿಗಂತ ಡಿಜಿಟಲ್ ಡೆಸ್ಕ್
ಇಂದು ಬಸವ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಗದ್ಗುರು ಬಸವೇಶ್ವರರಿಗೆ ನಮನ ಸಲ್ಲಿಸಿದರು. ಕನ್ನಡದಲ್ಲೇ ಟ್ವಿಟ್ ಮಾಡಿರುವ ಪ್ರಧಾನಿ ಮೋದಿ, 2020ರಲ್ಲಿ ಜಗದ್ಗುರು ಬಸವೇಶ್ವರರ ಕುರಿತು ಮಾತನಾಡಿರುವ ತಮ್ಮ ಭಾಷಣವನ್ನು ಸಹ ಹಂಚಿಕೊಂಡಿದ್ದಾರೆ.
ಬಸವ ಜಯಂತಿಯ ಈ ಶುಭಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ಗೌರವ ನಮನಗಳು. ಬಸವಣ್ಣನವರ ಚಿಂತನೆ, ಬೋಧನೆ ಹಾಗು ತತ್ವಾದರ್ಶಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ ಶಕ್ತಿ ತುಂಬುತ್ತಿದೆ. ಜಗಜ್ಯೋತಿ ಬಸವೇಶ್ವರರ ಕುರಿತು 2020ರಲ್ಲಿ ನಾನು ಮಾಡಿದ ಭಾಷಣವನ್ನು ಹಂಚಿಕೊಳ್ಳುತ್ತಿರುವೆ.https://t.co/RMDe2bTiMD
— Narendra Modi (@narendramodi) May 3, 2022
ಬಸವ ಜಯಂತಿಯ ಈ ಶುಭ ಸಂದರ್ಭದಲ್ಲಿ ಜಗದ್ಗುರು ಬಸವೇಶ್ವರರಿಗೆ ಗೌರವ ನಮನಗಳು. ಬಸವಣ್ಣನವರ ಚಿಂತನೆ, ಬೋಧನೆ ಹಾಗೂ ತತ್ವಾದರ್ಶಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರಿಗೆ ಶಕ್ತಿ ತುಂಬುತ್ತಿದೆ ಎಂದು ಪ್ರಧಾನಿ ಹೇಳಿದ್ದಾರೆ.