ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬಿಜೆಪಿ ಕೇಂದ್ರ ನಾಯಕ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ.
ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವು ದಿನಗಳು ಇರುವಂತೆ, ಭರ್ಜರಿ ಪ್ರಚಾರ, ರ್ಯಾಲಿಗಳು ಆರಂಭವಾಗಲಿವೆ. ನಿನ್ನೆಯಷ್ಟೇ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದ್ದು, ಬಿಜೆಪಿ ಅಭ್ಯರ್ಥಿಗಳು ಕಾರ್ಯಕರ್ತರ ಜತೆ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದ್ದಾರೆ.
ಇನ್ನು ಬಿಜೆಪಿ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪ್ರಧಾನಿ ಮೋದಿ ಹಾಗೂ ಇನ್ನಿತರ ನಾಯಕರು ರಾಜ್ಯಕ್ಕೆ ಆಗಮಿಸಲಿದ್ದಾರೆ. ಇಂದು ಚಾಣಕ್ಯ ಅಮಿತ್ ಶಾ ಹಾಗೂ ನಡ್ಡಾ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ಅಮಿತ್ ಶಾ ಬೆಂಗಳೂರಿನಲ್ಲಿ ಪ್ರಚಾರ ಮಾಡಲಿದ್ದು, ನಡ್ಡಾ ಬೀದರ್ನಲ್ಲಿ ರೋಡ್ ಶೋ ನಡೆಸಲಿದ್ದಾರೆ. ಅಮಿತ್ ಶಾ ನಾಳೆ ಮಧ್ಯಾಹ್ನದವರೆಗೂ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮಧ್ಯಾಹ್ನ 12 ಗಂಟೆಗೆ ದೆಹಲಿಗೆ ವಾಪಾಸಾಗಲಿದ್ದಾರೆ. ಇನ್ನು ನಡ್ಡಾ ಬೆಳಗ್ಗೆಯೇ ಬೀದರ್ಗೆ ಎಂಟ್ರಿ ನೀಡಲಿದ್ದು, ರಾತ್ರಿ 10 ಗಂಟೆ ವೇಳೆಗೆ ಬೀದರ್ನಿಂದ ನಿರ್ಗಮಿಸಲಿದ್ದಾರೆ.