ತ್ರಿಪುರಾ ಬಿಜೆಪಿ ಉಪಾಧ್ಯಕ್ಷೆ ಮೇಲೆ ಉದ್ರಿಕ್ತರ ಗುಂಪಿನಿಂದ ದಾಳಿ: ಭದ್ರತಾ ಸಿಬ್ಬಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ತ್ರಿಪುರಾ ಬಿಜೆಪಿ ಉಪಾಧ್ಯಕ್ಷೆ ಪತಾಲ್ ಕನ್ಯಾ ಜಮಾತಿಯಾ ಅವರ ಮೇಲೆ ಸೆಪಹಿಜಾಲಾ ಜಿಲ್ಲೆಯ ಜಂಪೂಯಿಜಾಲಾದಲ್ಲಿ ಉದ್ರಿಕ್ತ ಜನರ ಗುಂಪೊಂದು ದಾಳಿ ನಡೆಸಿದ್ದು, ಅದೃಷ್ಟವಶಾತ್‌ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ತ್ರಿಪುರಾದ ಗೋಮತಿ ಜಿಲ್ಲೆಯ ತೈಡುವಿನಲ್ಲಿ ಸ್ಥಳೀಯ ಜನರ ಮೇಲೆ ದಬ್ಬಾಳಿಕೆ ನಡೆಸಿದವರಿಗೆ ಸೂಕ್ತ ಉತ್ತರ ನೀಡಲಾಗುವುದು ಎಂದು ತಿಪ್ರಾ ಮೋಥಾ ಅಧ್ಯಕ್ಷ ಪ್ರದ್ಯೋತ್ ಕಿಶೋರ್ ದೆಬ್ಬರ್ಮಾ ಹೇಳಿದ ಕೆಲವೇ ಗಂಟೆಗಳ ಬಳಿಕ ಪತಾಲ್ ಕನ್ಯಾ ಜಮಾತಿಯಾ ಅವರ ಮೇಲೆ ದಾಳಿ ನಡೆದಿದೆ. ಜಂಪೈಜಾಲಾದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಎದುರಾದ ಜನರ ಗುಂಪು ಅವರ ಬೆಂಗಾವಲು ತಂಡವನ್ನು ತಡೆದು, ಬಿಜೆಪಿ ನಾಯಕಿ ಮೇಲೆ ದಾಳಿ ನಡೆಸಲು ಯತ್ನಿಸಿತು.
ಮಹಿಳೆಯರು ಸೇರಿದಂತೆ ನೂರಾರು ಜನರಿದ್ದ ಗುಂಪು ಎರಡು ವಾಹನಗಳನ್ನು ಹಾನಿಗೊಳಿಸಿದ್ದಾರೆ ಎಂದು ಸ್ಥಳೀಯ ಇನ್ಸ್‌ಪೆಕ್ಟರ್ ಜನರಲ್ ಅರಿಂದಮ್ ನಾಥ್ ಹೇಳಿದ್ದಾರೆ.ಘಟನೆ ವೇಳೆ ಜಮಾತಿಯಾ ಜೊತೆಗಿದ್ದ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ಪತಲ್‌ ಕನ್ಯಾ ಅವರಿಗೆ ಬೆಂಗಾವಲಾಗಿ ರಕ್ಷಣೆ ನೀಡಿದ ಪೊಲೀಸರು ಅವರನ್ನು ತ್ರಿಪುರಾ ಸ್ಟೇಟ್‌ ರೈಫಲ್ಸ್(‌ ಟಿಎಸ್ ಆರ್)‌ ಪ್ರಧಾನ ಕಚೇರಿಗೆ ಕರೆದೊಯ್ದರು. ಬಳಿಕ ಪರಿಸ್ಥಿತಿ ನಿಯಂತ್ರನಕ್ಕೆ ಬಂದಿದೆ.
ಜಮಾತಿಯಾ ಅವರು ಇತ್ತೀಚೆಗೆ ತ್ರಿಪುರಾ ಪೀಪಲ್ಸ್ ಫ್ರಂಟ್ (ಟಿಪಿಎಫ್) ತೊರೆದು ಕೇಸರಿ ಪಕ್ಷಕ್ಕೆ ಸೇರಿದ್ದರು. ಘಟನೆಯ ಹಿನ್ನೆಲೆಯಲ್ಲಿ ಬುಡಕಟ್ಟು ಕಲ್ಯಾಣ ಸಚಿವ ರಾಮಪಾದ ಜಮಾತಿಯಾ ಮತ್ತು ಪಾತಾಳ ಕನ್ಯಾ ಜಮಾತಿಯಾ ಭಾಗವಹಿಸಬೇಕಿದ್ದ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ ಎಂದು ಐಜಿ ತಿಳಿಸಿದ್ದಾರೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!