ದರ್ಶನ್ ಗ್ಯಾಂಗ್ ಗೆ ಮತ್ತೆ ಶುರುವಾಯ್ತು ಸಂಕಷ್ಟ: ರದ್ದಾಗುತ್ತಾ ಜಾಮೀನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ದರ್ಶನ್ ಅವರು ಪೂರ್ಣ ಪ್ರಮಾಣದ ಜಾಮೀನು ಪಡೆದು ಕೋರ್ಟ್​ನಿಂದ ಹೊರ ಬಂದಿದ್ದಾರೆ. ಅವರ ಜೊತೆ ಪವಿತ್ರಾ ಗೌಡ ಸೇರಿ ಅನೇಕರಿಗೆ ಜಾಮೀನು ಸಿಕ್ಕಿದೆ.

ದರ್ಶನ್ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಲು ಬೆಂಗಳೂರು ಪೊಲೀಸರು ಇದೀಗ ರೆಡಿ ಆಗಿದ್ದಾರೆ. ಗೃಹ ಇಲಾಖೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ದರ್ಶನ್​ಗೆ ಮತ್ತೆ ಸಂಕಷ್ಟ ಎದುರಾಗಿದೆ.

ದರ್ಶನ್ ಅವರು ಆರಂಭದಲ್ಲಿ ಸರ್ಜರಿಯ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದಿದ್ದರು. ಆ ಬಳಿಕ ಪೂರ್ಣ ಪ್ರಮಾಣದ ಜಾಮೀನು ಪಡೆದರು.

ಈಗಾಗಲೇ ಗೃಹ ಇಲಾಖೆಯಿಂದ ಅನುಮತಿ ನೀಡಿ ಕಡತ ರವಾನೆ ಆಗಿದೆ. ಶೀಘ್ರದಲ್ಲೇ ಸುಪ್ರೀಂಕೋರ್ಟ್​ಗೆ ಪೊಲೀಸರು ಮೇಲ್ಮನವಿ ಸಲ್ಲಿಸಲಿದ್ದಾರೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!