ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದಲ್ಲಿ ಬೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 15 ಮಂದಿ ಮೃತಪಟ್ಟಿದ್ದಾರೆ.
ವೈಶಾಲಿ ಜಿಲ್ಲೆಯ ಮೆಹನಾರ್ನಲ್ಲಿ ಜನನಿಬಿಡ ರಸ್ತೆಗೆ ಟ್ರಕ್ ನುಗ್ಗಿ ಪಾದಚಾರಿಗಳ ಮೇಲೆ ಹರಿದಿದೆ. ಅಪಘಾತದಲ್ಲಿ ಏಳು ಮಕ್ಕಳು ಸೇರಿ 15 ಮಂದಿ ಮೃತಪಟ್ಟಿದ್ದಾರೆ.
ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿಶಾದ ವ್ಯಕ್ತಪಡಿಸಿದ್ದು, ಇದೊಂದು ದೊಡ್ಡ ದುರಂತ, ಮೃತರ ಕುಟುಂಬಗಳಿಗೆ ನಿಗದಿತ ಪ್ರಮಾಣಿತ ವಿಧಾನದ ಪ್ರಕಾರ ಎಕ್ಸ್ ಗ್ರೇಷಿಯಾ ಅನುದಾನ ನೀಡಲಾಗುತ್ತದೆ ಎಂದಿದ್ದಾರೆ.
ಭೂಯಾನ್ ಬಾಬಾ ಪೂಜೆ ಹಿನ್ನೆಲೆ ಔತಣಕೂಟ ಮುಗಿಸಿ ಜನರು ವಾಪಾಸಾಗುತ್ತಿದ್ದರು. ಪೀಪಲ್ ಟ್ರೀ ಬಳಿ ನಿಂತಿದ್ದ ಜನರ ಮೇಲೆ ಟ್ರಕ್ ಹರಿದಿದೆ. ವೇಗವಾಗಿ ಮಹಾನಾರ್ ಕಡೆ ತೆರಳುತ್ತಿದ್ದ ಟ್ರಕ್ ಜನರ ಮೇಲೆ ಹರಿದಿದೆ. ಚಾಲಕ ಕುಡಿತದ ಅಮಲಿನಲ್ಲಿದ್ದ ಎಂದು ಹೇಳಲಾಗಿದೆ. ಅಷ್ಟು ಜನರನ್ನು ಕೊಂದ ಚಾಲಕ ಟ್ರಕ್ನಲ್ಲಿ ಕುಳಿತಿದ್ದು, ಭಯಕ್ಕೆ ಟ್ರಕ್ನಿಂದ ಕೆಳಕ್ಕೆ ಇಳಿದಿಲ್ಲ. ಬಳಿಕ ಪೊಲೀಸರು ಬಂದು ಆತನನ್ನು ಟ್ರಕ್ನಿಂದ ಇಳಿಸಿದ್ದಾರೆ.
ಪ್ರಧಾನಿ ಮೋದಿ ಸಂತಾಪ: ಅಪಘಾತದ ಬಗ್ಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ, ಈ ಅಪಘಾತದ ಸುದ್ದಿ ಅತ್ಯಂತ ದುಃಖಕರವಾಗಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದಿದ್ದಾರೆ. ಮೃತರ ಕುಟುಂಬಗಳಿಗೆ ಎರಡು ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ ಪರಿಹಾರ ಘೊಷಿಸಲಾಗಿದೆ.
ರಾಷ್ಟ್ರಪತಿ ದ್ರೌಪತಿ ಮುರ್ಮು ಸಂತಾಪ: ರಸ್ತೆ ಅಪಘಾತದಲ್ಲಿ ಮಕ್ಕಳು ಸೇರಿ ಹಲವರು ಮೃತಪಟ್ಟಿದ್ದಾರೆ. ಇದು ನೋವಿನ ಸಂಗತಿಯಾಗಿದೆ. ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದಿದ್ದಾರೆ.