ರಸ್ತೆ ಪಕ್ಕ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಲಾರಿ: 3 ಸಾವು 11 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ತಮ್ಮ ನಿತ್ಯದ ದುರಸ್ತಿ ಕೆಲಸ ಮುಗಿಸಿ ವಿಶ್ರಾಂತಿ ಪಡೆಯಲು ರಸ್ತೆಯ ಪಕ್ಕ ಮಲಗಿದ್ದ ಕಾರ್ಮಿಕರ ಮೇಲೆ ಲಾರಿ ಹಾರಿದ ಪರಿಣಾಮ 3 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು 11 ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ಕೆಎಂಪಿ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ.

ಹರಿಯಾಣದ ಜಜ್ಜರ್ ಬಳಿಯಿರುವ ಕುಂಡ್ಲಿ-ಮನೇಸರ್-ಪಲ್ವಾಲ್ (ಕೆಎಂಪಿ) ಎಕ್ಸ್‌ಪ್ರೆಸ್‌ವೇಯಲ್ಲಿ ದುರಸ್ತಿ ಕೆಲಸ ಮಾಡುತ್ತಿದ್ದ ಕೆಲಸಗಾರರು ತಮ್ಮ ಕೆಲಸ ಮುಗಿಸಿ ರಸ್ತೆ ಬದಿ ಮಲಗಿದ್ದರು.ಹಿಂಬದಿಯಿಂದ ಅತೀ ವೇಗದಲ್ಲಿ ಬಂದ ಲಾರಿಯೊಂದು ನಿದ್ರಿಸುತ್ತಿದ್ದ ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ.
ಗಾಯಗೊಂಡವರಲ್ಲಿ, 10 ಗಾಯಾಳುಗಳನ್ನು ಚಿಕಿತ್ಸೆಗಾಗಿ ರೋಹ್ಟಕ್‌ನ ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ಗೆ (ಪಿಜಿಐಎಂಎಸ್) ಕಳುಹಿಸಲಾಗಿದ್ದು, ಒಬ್ಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಬಹದ್ದೂರ್‌ಗಢ್‌ನ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ. ಮೂವರ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬಹದ್ದೂರ್‌ಗಢ ಜನರಲ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!