ಹೊಸದಿಗಂತ ವರದಿ ವಿಜಯಪುರ:
ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣ, ದೊಡ್ಡ ಹಗರಣವಾಗಿದ್ದು, ಇದನ್ನು ಮುಚ್ಚಿ ಹಾಕಲು ಯತ್ನ ಮಾಡಲಾಗುತ್ತಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.
ಮಾಜಿ ಸಿಎಂ ಮಗ ಸಹಿತ ಪಿಎಸ್ಐ ಹಗರಣದಲ್ಲಿ ಇದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೆ ವಿಚಾರ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿ, ಪಿಎಸ್ಐ ಅಕ್ರಮದಲ್ಲಿ ಪಾಲು ಎಲ್ಲರದ್ದು ಇದೆ. ಹಗರಣದಲ್ಲಿ ಯಾರು ಯಾರು ಇದ್ದಾರೆ ಎಂದು ಎಲ್ಲರೂ ಬಿಚ್ಚಿ ಹೇಳಬೇಕು ಎಂದರು.
ನ್ಯಾಯಾಧೀಶರು ಸ್ಟ್ರಾಂಗ್ ಇದ್ದಾರೆ. ಅದಕ್ಕಾಗಿ ಅವರನ್ನು ಸರ್ಕಾರ ವರ್ಗಾವಣೆ ಮಾಡಬಾರದು. ಪಿಎಸ್ಐ ಅಕ್ರಮದಲ್ಲಿ ದೊಡ್ಡ ದೊಡ್ಡವರು ಇದ್ದಾರೆ ಎಂದರು.
ಮಾಜಿ ಸಿಎಂ ಮಗ ಇದ್ದಾರೆ ಎಂದ್ರೇ ಯಾರು ? ದೇವೇಗೌಡರ ಮಗ, ಸಿದ್ದರಾಮಯ್ಯ ಮಗ ಬರುತ್ತಾರೆ ? ಅದಕ್ಕಾಗಿ ಯಾರ ಮಗ ಇದ್ದಾರೆ ಎನ್ನುವುದನ್ನು ಹೇಳಬೇಕು ಎಂದರು.