ಹೊಸದಿಗಂತ ಡಿಜಿಟಲ್ ಡೆಸ್ಕ್ :
ಎಲ್ಲೆಡೆ ಮಂಜು ತುಂಬಿದ ವಾತಾವರಣ ಹೀಗಾಗಿ ಅನೇಕರಿಗೆ ಶೀತ ಕೆಮ್ಮಿನ ಸಮಸ್ಯೆಗಳು ಎದುರಾಗುತ್ತಿವೆ. ಈ ಸಮಸ್ಯೆಗೆ ಮನೆಯಲ್ಲೇ ಪರಿಹಾರ ಕಂಡುಕೊಳ್ಳಲು ಈ ತುಳಸಿ ಕಷಾಯ ರೆಸಿಪಿ ಮಾಡಿ ನೋಡಿ.
ಬೇಕಾಗುವ ಸಾಮಗ್ರಿಗಳು :
ನೀರು
ತುಳಸಿ
ಕಾಳು ಮೆಣಸಿನ ಪುಡಿ
ಕಲ್ಲು ಸಕ್ಕರೆ
ಮಾಡುವ ವಿಧಾನ :
* ಮೊದಲು ಪಾತ್ರೆಗೆ ತುಳಸಿ ಎಲೆ ಹಾಕಿ ಕುದಿಸಿ.
* ನಂತರ ಅದಕ್ಕೆ ಶುಂಠಿ ಪುಡಿ (ಜಜ್ಜಿದ ಶುಂಠಿ), ಕಾಳು ಮೆಣಸಿನ ಪುಡಿ, ಕಲ್ಲು ಸಕಕ್ರೆ ಹಾಕಿ ಚೆನ್ನಾಗಿ ಕುದಿಸಿ.
* ಈಗ ಸೋಸಿ ಬಿಸಿ ಬಿಸಿ ಕಷಾಯ ಕುಡಿಯಿರಿ.
ಈ ಕಷಾಯವನ್ನು ದಿನದಲ್ಲಿ ಮೂರು ಬಾರಿ ಕುಡಿದರೆ ಗಂಟಲು ಕೆರೆತ, ಕೆಮ್ಮು, ಶೀತ ಇವು ಕಡಿಮೆಯಾಗಿ ಆರಾಮ ಅನಿಸುವುದು.