ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಷ್ಟೇ ಅಲ್ಲ ತುಮಕೂರು ಜನತೆಗೂ ರಸ್ತೆ ಗುಂಡಿಗಳ ಕಾಟ ತಪ್ಪಿಲ್ಲ. ರಸ್ತೆ ಗುಂಡಿಗೆ ಸಿಲುಕಿದ ಖಾಸಗಿ ಬಸ್ವೊಂದು ನಿಯಂತ್ರನ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದ ಘಟನೆ ಗುರುವಾರ ತಡರಾತ್ರಿ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವಿರೂಪಸಮುದ್ರ ಬಳಿ ನಡೆದಿದೆ.
ಅದೃಷ್ಟವಾಶಾತ್ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣಹಾನಿಯಾದೆಮ ಎಲ್ಲರೂ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪಾವಗಡ ತಾಲೂಕಿನ ಹಲವು ಹಳ್ಳಿಗಳಿಂದ ಕಾರ್ಮಿಕರು ಕೆಲಸಕ್ಕೆ ಕರೆದೊಯ್ಯುತ್ತಿದ್ದ ಎನ್ನಲಾಗಿದ್ದು, ಹೊಂಡಗುಂಡಿಗಳಿಂದಾಗಿ ನಿಯಂತ್ರಣ ಕಳೆದುಕೊಂಡು ಈ ದುರಂತ ನಡೆದಿದೆ. ಘಟನೆ ಸಂಬಂಧ ತಿರುಂಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.