ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರು ರೈಲು ನಿಲ್ದಾಣಕ್ಕೆ ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ಇಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ರೈಲ್ವೇ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.
89 ಕೋಟಿ ರೂ. ವೆಚ್ಚದಲ್ಲಿ ಹೊಸ ರೈಲು ನಿಲ್ದಾಣ ನಿರ್ಮಾಣಕ್ಕೆ ಟೆಂಡರ್ ಪೂರ್ಣಗೊಂಡಿದೆ. ಹೊಸ ರೈಲು ನಿಲ್ದಾಣ ನಿರ್ಮಾಣದ ಬಳಿಕ ತುಮಕೂರು ರೈಲು ನಿಲ್ದಾಣಕ್ಕೆ ಶ್ರೀಗಳ ಹೆಸರು ನಾಮಕರಣ ಮಾಡಲಾಗುವುದು ಎಂದು ಹೇಳಿದರು.