ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ತುಮಕೂರಿನ ಸಿದ್ಧಗಂಗಾ ಮಠದ ಸಿದ್ದಲಿಂಗ ಶ್ರೀಗಳು ಮತಗಟ್ಟೆ ಸಂಖ್ಯೆ 116ರಲ್ಲಿ ಮತದಾನ ಮಾಡಿದರು. ಈ ವೇಳೆ ಪ್ರಜಾಪ್ರಭುತ್ವದ ಯಶಸ್ಸಿಗೆ ಪ್ರತಿಯೊಬ್ಬರೂ ಮತ ಚಲಾಯಿಸಿ ಎಂದು ಕರೆ ನೀಡಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪ್ರಜಾಪ್ರಭುತ್ವದಲ್ಲಿ ಮತದಾನಕ್ಕೆ ಪ್ರಮುಖವಾದ ಮಹತ್ವವಿದೆ. ಹಾಗಾಗಿ 18 ವರ್ಷ ತುಂಬಿದ ಎಲ್ಲರೂ ಮತದಾನ ಮಾಡಬೇಕೆಂದು ಕರೆ ನೀಡಿದರು. ಮನೆಯಲ್ಲಿ ಕುಳಿತುಕೊಳ್ಳದೇ ಮತಗಟ್ಟೆಗೆ ಬಂದು ಯಾವುದೇ ಆಮಿಷಕ್ಕೆ ಒಳಗಾಗದೇ ನ್ಯಾಯಯುತವಾಗಿ ವೋಟ್ ಹಾಕಬೇಕು ಎಂದು ಹೇಳಿದರು.