ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ರಾಜಕೀಯದಲ್ಲಿ ಮತ್ತಷ್ಟು ಬೆಳವಣಿಗೆ ನಡೆದಿದ್ದು, ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗುವಂತೆ ಬಿಜೆಪಿ ಹೈಕಮಾಂಡ್ ಮನವಿ ಮಾಡಿದೆ.
ಈ ಕುರಿತು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮಾಹಿತಿ ನೀಡಿದ್ದು, ‘ಫಡ್ನವೀಸ್ ಸರ್ಕಾರದ ಭಾಗವಾಗೋದಿಲ್ಲ ಎಂದಿದ್ದಾರೆ.ಆದ್ರೆ, ನಾವು ಅವ್ರು ಉಪ ಮುಖ್ಯಮಂತ್ರಿಯಾಗಬೇಕು ಎಂದು ಮನವಿ ಮಾಡಿದ್ದೇವೆ’ ಎಂದರು.
ದೇವೇಂದ್ರ ಫಡ್ನವೀಸ್ ಏಕನಾಥ ಶಿಂಧೆ ಮುಖ್ಯಮಂತ್ರಿಯಾಗಲಿದ್ದಾರೆ. ನಾನು ಸರಕಾರದ ಭಾಗವಾಗಿರಲ್ಲ ಎಂದಿದ್ದರು. ಇದೀಗ ದೇವೇಂದ್ರ ಫಡ್ನವೀಸ್ ಸರ್ಕಾರದ ಭಾಗವಾಗಬೇಕೆಂದು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ ಎಂದು ಜೆಪಿ ನಡ್ಡಾ ಹೇಳಿದ್ದಾರೆ.