July 14, 2026
Tuesday, July 14, 2026
spot_img

ತ್ವಿಶಾ ಶರ್ಮಾ ಪ್ರಕರಣಕ್ಕೆ ಟ್ವಿಸ್ಟ್: ಅತ್ತೆಗೆ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದುಪಡಿಸಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟಿ–ಮಾಡೆಲ್ ತ್ವಿಶಾ ಶರ್ಮಾ ಅವರ ವರದಕ್ಷಿಣೆ ಕಿರುಕುಳ ಸಾವಿನ ಪ್ರಕರಣದಲ್ಲಿ ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಾಜಿ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ಅವರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ ರದ್ದುಪಡಿಸಿದೆ.

ಪ್ರಕರಣದ ಹಿನ್ನೆಲೆ

ಮೇ 12ರಂದು ತ್ವಿಶಾ ಶರ್ಮಾ ಮೃತಪಟ್ಟಿದ್ದರು. ಅದಾದ ಕೆಲವೇ ದಿನಗಳಲ್ಲಿ ಮೇ 15ರಂದು ಗಿರಿಬಾಲಾ ಸಿಂಗ್ ಅವರಿಗೆ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿತ್ತು. ಇದೇ ವೇಳೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ:

ಸಿಬಿಐ ತನಿಖೆಗೆ ವೇಗ

ಹೈಕೋರ್ಟ್ ತೀರ್ಪಿನ ಬಳಿಕ ಸಿಬಿಐಗೆ ಆರೋಪಿಯನ್ನು ಬಂಧಿಸುವ ಸಾಧ್ಯತೆ ಇದ್ದು. ಅಧಿಕಾರಿಗಳು ಶೀಘ್ರದಲ್ಲೇ ಗಿರಿಬಾಲಾ ಸಿಂಗ್ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ತನಿಖೆಯಲ್ಲಿ ಅಸಹಕಾರದ ಆರೋಪ

ಹೈಕೋರ್ಟ್, ಆರೋಪಿಗಳು ತನಿಖಾ ಸಂಸ್ಥೆಗೆ ಸಹಕಾರ ನೀಡದಿರುವುದನ್ನು ಗಮನಿಸಿದೆ. ಸಾಕ್ಷ್ಯಗಳು ಮತ್ತು ಹೇಳಿಕೆಗಳಲ್ಲಿ ಸ್ಪಷ್ಟ ಆರೋಪಗಳು ಇರುವುದಾಗಿ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಮರಣೋತ್ತರ ವರದಿಯಲ್ಲಿ ದೇಹದಲ್ಲಿ ಹಲವು ಗಾಯಗಳು ಕಂಡುಬಂದಿರುವುದು ಉಲ್ಲೇಖವಾಗಿದ್ದು, ಪ್ರಕರಣದ ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ ಎಂದು ಹೈಕೋರ್ಟ್ ಹೇಳಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !