ಬಾಂಗ್ಲಾ ವಿರುದ್ಧ ರೋಚಕ ಗೆಲುವು ತಂದುಕೊಟ್ಟ ಅಶ್ವಿನ್- ಅಯ್ಯರ್: ನೆಟ್ಟಿಗರ ಬಹುಪರಾಕ್‌

ಹೊಸದಿಗಂತ ಡಿಜಿಟಡಲ್‌ ಡೆಸ್ಕ್‌
ಬಾಂಗ್ಲಾ ವಿರುದ್ಧದ ಅನಿರೀಕ್ಷಿತ ಏಕದಿನ ಸರಣಿಯಿಂದ ವಿಚಲಿತವಾಗಿದ್ದ ಟೀಂ ಇಂಡಿಯಾ ಬಾಂಗ್ಲಾದೇಶ ವಿರುದ್ಧದ ಟೆಸ್ಟ್‌ ಸರಣಿಯನ್ನು 2-0 ಕ್ಲೀನ್‌ ಸ್ವೀಪ್‌ ಮಾಡುವ ಮೂಲಕ ಸೇಡು ತೀರಿಸಿಕೊಂಡಿದೆ. 145 ರನ್ ಬೆನ್ನಟ್ಟಿದ ಟೀಂ ಇಂಡಿಯಾ ಒಂದು ಹಂತದಲ್ಲಿ 74 ಕ್ಕೆ 7 ವಿಕೆಟ್‌ ಕಳೆದುಕೊಂಡು ಸೋಲಿನ ಅಂಚಿನಲ್ಲಿತ್ತು. ಈ ಹಂತದಲ್ಲಿ ಜೊತೆಯಾದ ರವಿಚಂದ್ರನ್ ಅಶ್ವಿನ್ (42*) ಮತ್ತು ಶ್ರೇಯಸ್ ಅಯ್ಯರ್ (29*) ಅಜೇಯ 71 ರನ್‌ಗಳ ಜೊತೆಯಾಟ ಆಡಿ ಮೂರು ವಿಕೆಟ್‌ಗಳ ಜಯ ತಂದುಕೊಟ್ಟರು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ವಿಶ್ವಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಗೆ ಮತ್ತಷ್ಟು ಹತ್ತಿರವಾಗಿದೆ.
ಟೀಂ ಇಂಡಿಯಾ ಗೆಲುವಿಗೆ ಸಾಮಾಜಿಕ ತಾಣದಲ್ಲಿ ನೆಟ್ಟಿಗರು ಬಹುಪಾರಾಕ್‌ ಹೇಳಿದ್ದಾರೆ. ಹಲವಾರು ಹಾಲಿ ಮತ್ತು ಮಾಜಿ ಕ್ರಿಕೆಟಿಗರು ಟ್ವಿಟ್‌ ಮೂಲಕ ಟೀಮ್ ಇಂಡಿಯಾವನ್ನು ಅಭಿನಂದಿಸಿದ್ದಾರೆ. “@ashwinravi99 ಮತ್ತು @ShreyasIyer15 ರ ಒತ್ತಡದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಮಾಡಿದರು ಎಂದು ಭಾರತದ ಅನುಭವಿ ವಿಕೆಟ್‌ಕೀಪರ್-ಬ್ಯಾಟರ್ ದಿನೇಶ್ ಕಾರ್ತಿಕ್ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!