ಡಿ.ಕೆ.ಶಿವಕುಮಾರ್‌ ಔತಣಕೂಟದಲ್ಲಿ ಇಬ್ಬರು ಬಿಜೆಪಿ ಶಾಸಕರು ಪ್ರತ್ಯಕ್ಷ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾಗಿ ಜುಲೈ 2ಕ್ಕೆ ಐದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಔತಣಕೂಟ (Dinner) ಏರ್ಪಡಿಸಿದ್ದಾರೆ.

ಇಂದು ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಡಿಕೆಶಿ ಭೋಜನಕೂಟ ಆಯೋಜಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್‌ನ ಶಾಸಕರು, ಸಚಿವರು ಭಾಗವಹಿಸಿದ್ದಾರೆ.

ಇದರ ನಡುವೆ ಡಿಕೆಶಿ ಆಯೋಜಿಸಿರುವ ಈ ಔತಣಕೂಟದಲ್ಲಿ ಬಿಜೆಪಿ ಶಾಸಕರಾದ ಎಸ್​ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.

ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್​ ಈ ಹಿಂದೆ ಆಪರೇಷನ್ ಕಮಲದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಹಾಗೇ ಕಳೆದ ವಿಧಾನಸಭಾ ಚುನಾವಣೆಯಲ್ಲೂ ಸಹ ಬಿಜೆಪಿಯಿಂದ ಗೆದ್ದು ವಿಧಾನಸಭೆ ಪ್ರವೇಶಿಸಿದ್ದಾರೆ. ಆದ್ರೆ, ಪಕ್ಷದೊಂದಿಗೆ ಅಂತರ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್​ ಸರ್ಕಾರ ರಚನೆ ಸಂದರ್ಭದಲ್ಲೇ ಈ ಇಬ್ಬರು ಶಾಸಕರು ಬಿಜೆಪಿ ತೊರೆದು ವಾಪಸ್​ ಕಾಂಗ್ರೆಸ್​ಗೆ ವಾಪಸ್ ಆಗುತ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!