ಘೋರ ದುರಂತ: ಮಳೆನೀರು ತುಂಬಿದ್ದ ತಗ್ಗುಗುಂಡಿಗೆ ಬಿದ್ದು ಇಬ್ಬರು ಬಾಲಕರು ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕಲಬುರಗಿಯಲ್ಲಿ ಘೋರ ದುರಂತ ನಡೆದಿದ್ದು, ‌ನಗರದ ದುಬೈ ಕಾಲೋನಿಯಲ್ಲಿ ಮಳೆ ನೀರು ತುಂಬಿದ್ದ ತಗ್ಗುಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಓವರ್‌ಹೆಡ್ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ತೆಗೆದಿದ್ದ ತಗ್ಗುಗುಂಡಿಗೆ ಆಯತಪ್ಪಿ ಬಿದ್ದು ಅಭಿ (11) ಮತ್ತು ಅಜಯ್ (12) ಎಂಬ ಬಾಲಕರು ಸಾವನ್ನಪ್ಪಿದ್ದಾರೆ.

ಮಳೆ ನೀರಿನಿಂದಾಗಿ ತಗ್ಗುಗುಂಡಿ ಸಂಪೂರ್ಣ ಭರ್ತಿಯಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ಚೌಕ್ ಪೊಲೀಸರು ಭೇಟಿ ನೀಡಿ ಓರ್ವ ಬಾಲಕನ ಶವ ಪತ್ತೆ ಹಚ್ಚಿದ್ದಾರೆ. ಮತ್ತೊಬ್ಬ ಬಾಲಕನ ಶವಕ್ಕಾಗಿ ಹುಡುಕಾಟ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!