ಮೀನು ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ಬಾಲಕರಿಬ್ಬರ ಸಾವು

ಹೊಸದಿಗಂತ ವರದಿ,ಕಲಬುರಗಿ:

ಮೀನು ಹಿಡಿಯಲು ಹೋಗಿ ಈಜು ಬಾರದೇ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಸೋಮವಾರ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕೊಳ್ಳೂರ್ ಗ್ರಾಮದಲ್ಲಿ ನಡೆದಿದೆ.

ಗೊಬ್ಬರು ಗ್ರಾಮದ ವಿಶ್ವದೀಪ್ ಬೋವಿ (16), ಬಂದರವಾಡ ಗ್ರಾಮದ ದಿಲೀಪ್ ಬೋವಿ (17) ಮೃತಪಟ್ಟ ದುದೈವಿಗಳಾಗಿದ್ದಾರೆ.

ಸೋಮವಾರ ಮಧ್ಯಾಹ್ನ ಗ್ರಾಮದ ಹೊರವಲಯದಲ್ಲಿನ‌ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದಾರೆ. ಈ ವೇಳೆ ಈಜು ಬಾರದೇ ಕೆರೆ ಕೆಸರಲ್ಲಿ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!