ಹಾಸನದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ಹೊಸದಿಗಂತ ವರದಿ, ಹಾಸನ :

ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಅಣತಿ ಗ್ರಾಮದಲ್ಲಿ ನಡೆದಿದೆ.

ನೂತನ್ (15) ಹಾಗೂ ಬೀರೇಶ್ (14) ಮೃತ ಬಾಲಕರು. ಬೇಸಿಗೆ ರಜೆ ಹಿನ್ನಲೆಯಲ್ಲಿ ವಳಗೇರಹಳ್ಳಿ ಗ್ರಾಮದ ಯಶ್ವಂತ್, ನೂತನ್, ಬೀರೇಶ್ ಪಕ್ಕದ ಅಣತಿ ಗ್ರಾಮದ ಕೆರೆಗೆ ಈಜಲು ತೆರಳಿದ್ದರು. ಈ ವೇಳೆ ಆಳವಾದ ಕೆರೆಗೆ ಇಳಿಯುತ್ತಿದ್ದಂತೆ ನೂತನ್ ಹಾಗೂ ಬೀರೇಶ್ ಮುಳುಗಿದ್ದಾರೆ.

ಕಣ್ಣೆದೆರು ಸಹೋದರರು ಮುಳುಗುತ್ತಿದ್ದನ್ನು ಕಂಡು ಯಶ್ವಂತ್ ರಕ್ಷಿಸಲು ಪರದಾಡಿದ್ದು ಯಾರಾದರೂ ಬನ್ನಿ ಎಂದು ಕಿರುಚಾಡಿದ್ದಾರೆ. ಆದರೆ ಯಶ್ವಂತ್‌ಗೆ ಈಜು ಬಾರದ ಕಾರಣ ಹಾಗೂ ಆ ಸ್ಥಳದಲ್ಲಿ ಯಾರು ಇಲ್ಲದಿದ್ದರಿಂದ ಸಹೋದರರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಕೆರೆಯಿಂದ ಶವಗಳನ್ನು ಹೊರತೆಗೆದಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ನುಗ್ಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!