ರಸ್ತೆಯಲ್ಲಿ ಗೂಳಿಗಳ ಕಾದಾಟಕ್ಕೆ ಒಂದೇ ಕುಟುಂಬದ ಆರು ಮಂದಿ ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಸ್‌ಗೆ ಕಾರು ಡಿಕ್ಕಿ ಹೊಡೆ‌ದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಇಂದು ನಡೆದಿದೆ.

ಧೋಲಾಪುರ ಜಿಲ್ಲೆಯ ಸಿಕರ್‌ನಲ್ಲಿರುವ ಶ್ಯಾಮ್‌ಜಿ ದೇಗುಲಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳದಲ್ಲಿ ಎರಡು ಗೂಳಿಗಳ ಶವಗಳೂ ಪತ್ತೆಯಾಗಿದ್ದು, ಗೂಳಿಗಳ ಕಾದಾಟದಿಂದ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹರೇಂದ್ರ ಸಿಂಗ್‌ (32), ಅವರ ಪತ್ನಿ ಮಮತಾ (30), ಮಗಳು ಜಾಹ್ನವಿ (6), ಮಮತಾ ಅವರ ಸಹೋದರಿ ಸುಧಾ (35) ಅವರ ಪತಿ ಸಂತೋಷ್‌ (37) ಹಾಗೂ ಅವರ ಪುತ್ರ ಅನೂಜ್ (5) ಮೃತಪಟ್ಟವರು.

ವಿಷಯ ತಿಳಿದ ಕೂಡಲೇ ತಕ್ಷಣವೇ ಪೊಲೀಸರು ಸ್ಥಳಕ್ಕೆ ಧಾವಿಸಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಆರು ಮಂದಿ ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಅಲ್ಲದೆ ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!