ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ವಿಭಾಗದ ರಜೋರಿಯಲ್ಲಿ ಇಬ್ಬರು ಸ್ಥಳೀಯರು ಯೋಧರ ಗುಂಡಿಗೆ ಬಲಿಯಾಗಿದ್ದಾರೆ ಎನ್ನುವ ಆರೋಪ ಎದುರಾಗಿದ್ದು, ಸಾರ್ವಜನಿಕರು ಸೇನೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.
ಸೇನಾ ಶಿಬಿರದ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಮೂವರ ಮೇಲೆ ಯೋಧರ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಒಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ.
ಈ ದಾಳಿಯಲ್ಲಿ ಮೃತಪಟ್ಟವರು ಸ್ಥಳೀಯ ನಾಗರಿಕರಾಗಿದ್ದು, ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ. ಸೇನೆಯ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಳಗ್ಗೆ ಸೇನಾ ಶಿಬಿರದ ಆಲ್ಫಾ ಗೇಟ್ ಬಳಿ ಬರುತ್ತಿದ್ದ ಇಬ್ಬರನ್ನು ಗುಂಡಿಕ್ಕಿ ಕೊಂದಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ರಜೋರಿ ನಿವಾಸಿಗಳಾದ ಶಾಲಿಂದರ್ ಕುಮಾರ್, ಕಮಲ್ ಕಿಶೋರ್ ಮೃತರು. ಸೇನಾ ಶಿಬಿರದ ಮೇಲೆ ಜನ ಕಲ್ಲು ತೂರಾಟ ನಡೆಸುತ್ತಿದ್ದಾರೆ. ಮೃತರ ಕುಟುಂಬಕ್ಕೆ ಧನಸಹಾಯ ಹಾಗೂ ಸಂಬಂಧಿಕರಿಗೆ ಉದ್ಯೋಗ, ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು ಎನ್ನುವುದು ಇವರ ಬೇಡಿಕೆಯಾಗಿದೆ.