ಕರ್ತವ್ಯದ ವೇಳೆ ಮಲಗಿದ್ದ ಇಬ್ಬರು ಕಾನ್ಸ್​ಟೇಬಲ್​ಗಳು ಸಸ್ಪೆಂಡ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕರ್ತವ್ಯದ ವೇಳೆ ಮಲಗಿದ್ದ ಆರೋಪದ ಮೇಲೆ ಇಬ್ಬರು ಕಾನ್ಸ್​ಟೇಬಲ್ ಗಳನ್ನು ಅಮಾನತು ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಹದೇವಪುರ ಪೊಲೀಸ್ ಠಾಣೆ ಕಾನ್ಸ್​ಟೇಬಲ್ ಈರಪ್ಪ ಉಂಡು ಮತ್ತು ಹೆಡ್​ ಕಾನ್ಸ್​ಟೇಬಲ್​ ಎ.ಎನ್.ಜಯರಾಮ್ ಅಮಾನತುಗೊಂಡವರು.

ಇಬ್ಬರು ಕಾನ್ಸ್​ಟೇಬಲ್‌ಗಳು ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ ನಿದ್ದೆಗೆ ಜಾರಿದ್ದಾರೆ. ಅದೇ ಸಮಯಕ್ಕೆ ರಾತ್ರಿ ಗಸ್ತಿನಲ್ಲಿದ್ದ ಸಿಎಆರ್ ಡಿಸಿಪಿ ಠಾಣೆಗೆ ಭೇಟಿ ನೀಡಿದ್ದಾರೆ. ಆಗ ಇಬ್ಬರು ಪೇದೆಗಳು ನಿದ್ರಿಸುತ್ತಿರುವುದನ್ನು ಕಂಡು ವೈಟ್​​​ಫೀಲ್ಡ್​​​ ಡಿಸಿಪಿಗೆ ವರದಿ ನೀಡಿದ್ದಾರೆ. ನಗರ ಸಶಸ್ತ್ರ ಪಡೆ ಡಿಸಿಪಿ ಎಸ್.ಗಿರೀಶ್ ವರದಿ ಆಧರಿಸಿ ಕಾನ್ಸ್​ಟೇಬಲ್​ಗಳ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!