ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ತವ್ಯದ ವೇಳೆ ಮಲಗಿದ್ದ ಆರೋಪದ ಮೇಲೆ ಇಬ್ಬರು ಕಾನ್ಸ್ಟೇಬಲ್ ಗಳನ್ನು ಅಮಾನತು ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮಹದೇವಪುರ ಪೊಲೀಸ್ ಠಾಣೆ ಕಾನ್ಸ್ಟೇಬಲ್ ಈರಪ್ಪ ಉಂಡು ಮತ್ತು ಹೆಡ್ ಕಾನ್ಸ್ಟೇಬಲ್ ಎ.ಎನ್.ಜಯರಾಮ್ ಅಮಾನತುಗೊಂಡವರು.
ಇಬ್ಬರು ಕಾನ್ಸ್ಟೇಬಲ್ಗಳು ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ ನಿದ್ದೆಗೆ ಜಾರಿದ್ದಾರೆ. ಅದೇ ಸಮಯಕ್ಕೆ ರಾತ್ರಿ ಗಸ್ತಿನಲ್ಲಿದ್ದ ಸಿಎಆರ್ ಡಿಸಿಪಿ ಠಾಣೆಗೆ ಭೇಟಿ ನೀಡಿದ್ದಾರೆ. ಆಗ ಇಬ್ಬರು ಪೇದೆಗಳು ನಿದ್ರಿಸುತ್ತಿರುವುದನ್ನು ಕಂಡು ವೈಟ್ಫೀಲ್ಡ್ ಡಿಸಿಪಿಗೆ ವರದಿ ನೀಡಿದ್ದಾರೆ. ನಗರ ಸಶಸ್ತ್ರ ಪಡೆ ಡಿಸಿಪಿ ಎಸ್.ಗಿರೀಶ್ ವರದಿ ಆಧರಿಸಿ ಕಾನ್ಸ್ಟೇಬಲ್ಗಳ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.