ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆ ಡಿವೈಡರ್ಗೆ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕಾರಿನಲ್ಲಿದ್ದ ವಿನಯ ಹಿರೇಮಠ(28) ಮತ್ತು ಸಂದೀಪ್(29) ಮೃತದುರ್ದೈವಿಗಳು.
ಭಾನುವಾರ ತಡರಾತ್ರಿ ಈ ದುರಂತ ಸಂಭವಿಸಿದ್ದು, ಊಟ ಮಾಡಲೆಂದು ಢಾಬಾಗೆ ತೆರಳಿದ್ದ ಯುವಕರು ತಮ್ಮ ಕಾರಿನಲ್ಲಿ ಹಿಂದಿರುಗುವಾಗ ಹೆದ್ದಾರಿಯ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದಿದೆ. ಅದರ ಪರಿಣಾಮ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಘಟನೆಯಲ್ಲಿ ಮತ್ತೊಬ್ಬನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.