ಬಾಯ್ಲರ್ ಸ್ವಚ್ಛ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಸಾವು: ಓರ್ವನ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾರ್ಖಾನೆಯಲ್ಲಿ ಬಾಯ್ಲರ್ ಸ್ವಚ್ಛಗೊಳಿಸಲು ಹೋಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಈಸ್ಟ್‌ ಗೋದಾವರಿಯಲ್ಲಿ ನಡೆದಿದೆ. ಆಮ್ಲಜನಕದ ಕೊರತೆಯಿಂದ ಕಾರ್ಮಿಕರು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಪೂರ್ವ ಗೋದಾವರಿ ಜಿಲ್ಲೆಯ ಬಂಡಪುರಂ ಬಳಿಯ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಈ ದಾರುಣ ಘಟನೆ ನಡೆದಿದೆ. ಬಂಡಾಪುರದ ಬಳಿ ಪರಮೇಶು ಜೋಳದ ಕಾರ್ಖಾನೆಯಲ್ಲಿ ಬಾಯ್ಲರ್ ಕ್ಲೀನ್ ಮಾಡುತ್ತಿದ್ದ ಮೂವರು ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಸಹ ಕಾರ್ಮಿಕರು ಕೊವ್ವೂರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.

ಆದರೆ ಚಿಕಿತ್ಸೆ ಪಡೆಯುತ್ತಿದ್ದ ಮೂವರ ಪೈಕಿ ಇಬ್ಬರ ಸ್ಥಿತಿ ಹದಗೆಟ್ಟಿದ್ದರಿಂದ ಮೃತಪಟ್ಟಿದ್ದಾರೆ. ಮತ್ತೊಬ್ಬ ಕಾರ್ಮಿಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತ ಕಾರ್ಮಿಕರನ್ನು ದಾಮ ಬೀರುವ (23) ಮತ್ತು ಗಾಜುಲ ಶ್ರೀನು (26) ಎಂದು ಪೊಲೀಸರು ಗುರುತಿಸಿದ್ದಾರೆ. ಮೆಕ್ಕೆಜೋಳ ಕಾರ್ಖಾನೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಮೂವರು ಕಾರ್ಮಿಕರನ್ನು ಬಾಯ್ಲರ್ ಕ್ಲೀನಿಂಗ್ ಗೆ ಕಳುಹಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!