ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಇಬ್ಬರು ಮೃತಪಟ್ಟು, ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ರಾರಾವಿ ಗ್ರಾಮದ ಭೀರಪ್ಪ (45), ಸುನೀಲ್ (26) ಮೃತ ದುರ್ದೈವಿಗಳು. ಸಿಡಿಲು ಬಡಿದ ಪರಿಣಾಮ ವಿನೋದ್ (14) ಗಂಭೀರ ಗಾಯಗೊಂಡಿದ್ದಾನೆ.
ಕುರಿ ಮೇಯಿಸಲು ಹೋದಾಗ, ಮಳೆ ಬಂದಿದ್ದರಿಂದ ಮರದ ಆಶ್ರಯ ಪಡೆದಿದ್ದರು. ಮರದ ಕೆಳಗೆ ನಿಂತಾಗ ಸಿಡಿಲು ಬಡಿದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿರುವ ವಿನೋದ್ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.