ಹೊಸದಿಗಂತ ವರದಿ ಹೊನ್ನಾವರ :
ಕಾರಿಗೆ ಹೊತ್ತಿಕೊಂಡ ಬೆಂಕಿಯಲ್ಲಿ ಇಬ್ಬರು ಸುಟ್ಟು ಕರಕಲಾದ ದುರ್ಘಟನೆ ಗೇರುಸೊಪ್ಪ-ಸುಳೆಮುರ್ಕಿ ಕ್ರಾಸ್ ಸಮೀಪ ತಡರಾತ್ರಿ ನಡೆದಿದೆ.
ಕಾರು ಆಯತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದ್ದು ಒಳಗಿದ್ದ ಇಬ್ಬರು ಪ್ರಯಾಣಿಕರು ಗುರುತು ಪತ್ತೆಯಾಗದ ಸ್ಥಿತಿಯಲ್ಲಿ ಸುಟ್ಟು ಹೋಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಧಾವಿಸಿ ತನಿಖೆ ಆರಂಭ ಮಾಡಿದ್ದಾರೆ. ಕಾರಿನ ನೊಂದಣಿ ಸಂಖ್ಯೆ ಪತ್ತೆಯಾಗದ ಸ್ಥಿತಿಯಲ್ಲಿ ಕಾರು ಕರಕಲಾಗಿದೆ.



