April 29, 2026
Wednesday, April 29, 2026
spot_img

ಪೋಡಿ ಮಾಡಿಕೊಡಲು ಲಂಚ ಪಡೆದ ಇಬ್ಬರು ಲೋಕಾ ಬಲೆಗೆ

ಹೊಸದಿಗಂತ ವರದಿ ಗದಗ:

ಜಮೀನಿನ ಪೋಡಿ ಮಾಡಿಕೊಡಲು 2,500 ಲಂಚ ಪಡೆದ ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಮೋಜಣಿ ಡಾಟಾ ಎಂಟ್ರಿ ಅಪರೇಟರ್ ಕವಿತಾ ಚಿಕ್ಕಮಠ ಹಾಗೂ ಕಚೇರಿಯ ಹೊರಗುತ್ತಿಗೆ ಡಿ ಗ್ರೂಪ್ ನೌಕರ ನಾಗೇಶ ಬಡಿಗೇರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಗಣೇಶ ಮುಂಡರಗಿ ಎಂಬುವರು ತಾಲೂಕಿನ ಹರ್ಲಾಪುರದಲ್ಲಿ 6 ಗುಂಟೆ ಜಮೀನು ಖರೀದಿಸಿದ್ದರು. ಅದು ಮೂಲ ಮಾಲೀಕರ ಜತೆಗೆ ಜಂಟಿ ಉತಾರ ಇದ್ದು, ಅದನ್ನು ಪೋಡಿ ಮಾಡಿಕೊಡುವಂತೆ ಕಚೇರಿಗೆ ಹೋಗಿದ್ದರು. ಈ ವೇಳೆ ಕವಿತಾ ಚಿಕ್ಕಮಠ ೩ ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತ ಪೊಲೀಸರಿಗೆ ಲಿಖಿತ ದೂರು ನೀಡಿದ್ದರು.

ಗಣೇಶ ತಮ್ಮ ಕೆಲಸದ ಬಗ್ಗೆ ವಿಚಾರಿಸುವ ವೇಳೆ ಕವಿತಾ ಚಿಕ್ಕಮಠ 2,500 ಲಂಚ ಕೇಳಿದ್ದಾರೆ. ಅದನ್ನು ಅವರ ಹೇಳಿಕೆ ಮೇರೆಗೆ ಕಚೇರಿಯ ಜವಾನ ನಾಗೇಶ ಬಡಿಗೇರ ಸ್ವೀಕರಿಸುತ್ತಿದ್ದ ವೇಳೆ ಇಬ್ಬರನ್ನೂ ದಸ್ತಗಿರಿ ಮಾಡಲಾಗಿದೆ. ತನಿಖೆ ಮುಂದುವರಿದಿದೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಧಾರಾವಾಡ ಲೋಕಾಯುಕ್ತ ಎಸ್‌ಪಿ ಎಸ್.ಟಿ.ಸಿದ್ಧಲಿಂಗಪ್ಪ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಠಾಣೆಯ ಇನ್‌ಸ್ಪೆಕ್ಟರ್ ಎಸ್.ಎಸ್.ತೇಲಿ ಹಾಗೂ ಸಿಬ್ಬಂದಿಯಾದ ಹಸನ್, ಗಾರ್ಗಿ, ಬಾರಡ್ಡಿ, ದಿಡಗೂರು, ಸಂಗನಾಳ, ಜವಳಿ, ಅಂಬಿಗೇರ, ಹಿರೇಮಠ, ನೈನಾಪುರ ದಾಳಿ ನಡೆಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !