ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಣರಾಜ್ಯೋತ್ಸವದ ಧ್ವಜಾರೋಹಣದ ವೇಳೆ ವಿದ್ಯುತ್ ತಗುಲಿ ಇಬ್ಬರು ಮೃತಪಟ್ಟಿದ್ದಾರೆ
ತೆಲಂಗಾಣದ ಮುಲುಗು ಗ್ರಾಮದಲ್ಲಿ ಧ್ವಜದ ಪೈಪ್ಗೆ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ.
ಕಬ್ಬಿಣದ ಕಂಬಕ್ಕೆ ಧ್ವಜ ಕಟ್ಟಿ ಹಾರಿಸಲು ತಯಾರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಕಬ್ಬಿಣದ ಪೈಪ್ಗೆ ತಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರನ್ನು ಆಸ್ಪತ್ರಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಜಿತ್ ಹಾಗೂ ವಿಜಯ್ ಮೃತಪಟ್ಟಿದ್ದಾರೆ.