ಹೊಸದಿಗಂತ ವರದಿ ಹಾಸನ :
ಕೆರೆಗೆ ಈಜಲೆಂದು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಜಿನ್ನಾಪುರ ಗ್ರಾಮದಲ್ಲಿ ನಡೆದಿದೆ.
ಯಶ್ವಂತ್ಸಿಂಗ್ ಅಲಿಯಾಸ್ ಗಣೇಶ್ (29), ರೋಹಿತ್ (28) ಮೃತಪಟ್ಟ ಯುವಕರು. ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಇಬ್ಬರು ಸ್ನೇಹಿತರು. ಭಾನುವಾರ ಕೆಲಸ ಮುಗಿಸಿ ಸಂಜೆ ಕೆರೆಗೆ ಈಜಲು ತೆರಳಿದ್ದರು.
ಇಬ್ಬರು ಸ್ನೇಹಿತರು ಈಜು ಕಲಿತಿದ್ದರು. ಮೊದಲು ಕೆರೆಗೆ ಧುಮುಕಿದ್ದ ರೋಹಿತ್ ಕೆರೆಯಲ್ಲಿ ಬೆಳೆದಿದ್ದ ಮುಳ್ಳು, ಗಿಡಗೆಂಟೆಗಳು ಹಾಗೂ ಬಳ್ಳಿಗಳು ಕಾಲಿಗೆ ಸುತ್ತಿಕೊಂಡು ಕೆರೆಯಿಂದ ಮೇಲೆ ಬರಲಾರದೆ ಕಾಪಾಡಿ ಎಂದು ಕಿರುಚಾಡಿದ್ದಾನೆ.
ಈ ವೇಳೆ ಗೆಳೆಯನನ್ನು ರಕ್ಷಿಸಲು ಕೆರೆಗೆ ಜಿಗಿದ ಯಶ್ವಂತ್ಸಿಂಗ್ ಕೂಡ ಬಳ್ಳಿ, ಗಿಡಗೆಂಟೆಗಳು ನಡುವೆ ಸಿಲುಕಿಕೊಂಡಿವೆ. ಕೆರೆಯಿಂದ ಮೇಲೆ ಬರಲಾರದೆ ಇಬ್ಬರು ಗೆಳೆಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಶವಕ್ಕಾಗಿ ಶೋಧಕಾರ್ಯ ನಡೆಸಿದ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ
ತಡರಾತ್ರಿ ಇಬ್ಬರು ಯುವಕರು ಶವಗಳನ್ನು ಕೆರೆಯಿಂದ ಹೊರ ತೆಗೆದಿದ್ದಾರೆ. ಶ್ರವಣಬೆಳಗೊಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.