ಮನೆ ಹಂಚಿಕೆ ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಹೊಡೆದಾಟದಲ್ಲಿ ಇಬ್ಬರಿಗೆ ಗಾಯ

ಹೊಸದಿಗಂತ ವರದಿ,ಮೈಸೂರು:

ಮನೆ ಹಂಚಿಕೆ ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಹೊಡೆದಾಟದಲ್ಲಿ ಇಬ್ಬರು ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದಲ್ಲಿ ನಡೆದಿದೆ.
ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮ ಪಂಚಾಯತ್‌ನಲ್ಲಿ ಅಧ್ಯಕ್ಷೆ ಮಹಾದೇವಮ್ಮ ನೇತೃತ್ವದಲ್ಲಿ ಸಭೆ ನಡೆಯುತ್ತಿತ್ತು. ಈ ವೇಳೆ ಬಿಜೆಪಿ ಮುಖಂಡ ವೀರಭದ್ರಪ್ಪ ಮತ್ತು ಕಾಂಗ್ರೆಸ್ ಮುಖಂಡ ರಾಜು ನಡುವೆ ಮನೆ ಹಂಚಿಕೆ ವಿಚಾರಕ್ಕೆ ಮಾತಿನ ಚಕಮಕಿ ಪ್ರಾರಂಭವಾಯಿತು. ಅದು ವಿಕೋಪಕ್ಕೆ ತಿರುಗಿದಾಗ ಇಡೀ ಗ್ರಾಮ ಸಭೆಯ ಆವರಣ ಬಡಿದಾಟ,ಹೊಡೆದಾಟದ ತಾಣವಾಯಿತು.
ª ಎರಡು ಗುಂಪಿನವರು ಸಭೆಯಲ್ಲಿ ಹಾಕಲಾಗಿದ್ದ ಚೇರು ಹಾಗೂ ಕಲ್ಲುಗಳಿಂದ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ರಾಜಶೇಖರ ಹಾಗೂ ಗಣೇಶ್ ಎಂಬುವರಿಗೆ ಗಾಯಗಳಾಗಿದ್ದು, ಇಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇನ್ನೂ ಕೆಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಸಭೆಯಲ್ಲಿ ಗಲಾಟೆ ಪ್ರಾರಂಭವಾಗುತ್ತಿದ್ದAತೆ ಪಿಡಿಒ ಕರಿಯಪ್ಪ, ಪೊಲೀಸರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪರಿಸ್ಥಿತಿಯನ್ನು ಹತೋಟಿಗೆ ತಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!