ಲಾರಿ ತಡೆದು ಹಣ ವಸೂಲಿ: ASI ಸೇರಿ ಇಬ್ಬರು ಪೊಲೀಸರು ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಆರೋಪ ಮೇರೆಗೆ ಓರ್ವ ಎಎಸ್ಐ ಸೇರಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಕಳ್ಳಂಬೆಳ್ಳ ಠಾಣೆಯ ಎಎಸ್ಐ ಚಿದಾನಂದ ಸ್ವಾಮಿ ಹಾಗೂ ಪೊಲೀಸ್ ಜೀಪ್ ಚಾಲಕ ಚಿಕ್ಕಹನುಮಯ್ಯರನ್ನು ಅಮಾನತು ಮಾಡಿ ತುಮಕೂರು ಪೊಲೀಸ್​ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾಡ್ ಅವರು ಆದೇಶ ಹೊರಡಿಸಿದ್ದಾರೆ.

ತುಮಕೂರು ಮತ್ತು ಶಿರಾ ನಡುವೆ ಇರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿಗಳನ್ನು ತಡೆದು 200, 300 ರೂಪಾಯಿ ಹಣ ವಸೂಲಿ ಮಾಡುತ್ತಿದ್ದರು. ಲಾರಿ ಚಾಲಕರಿಂದ ಹಣ ಪಡೆಯುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿತ್ತು. ಬಳಿಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪೊಲೀಸರ ಲಂಚಬಾಕತನವನ್ನು ನೋಡಿ ನೆಟ್ಟಿಗರು ಆಕ್ರೋಶ ಹೊರಹಾಕಿದ್ದರು.

ಹಣ ವಸೂಲಿ ಪ್ರಕರಣ ತಮ್ಮ ಗಮನಕ್ಕೆ ಬರುತ್ತಿದ್ದಂತೆ ವರದಿ ಕೊಡುವಂತೆ ಶಿರಾ ಪೊಲೀಸ್ ಇನ್ಸ್​ಪೆಕ್ಟರ್​ಗೆ ತುಮಕೂರು ಎಸ್ಪಿ ಸೂಚನೆ ನೀಡಿದ್ದರು. ಪೊಲೀಸರು ಹಣ ಪಡೆದಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಎಎಸ್​ಐ ಚಿದಾನಂದ ಸ್ವಾಮಿ ಹಾಗೂ ಪೊಲೀಸ್ ಜೀಪ್ ಚಾಲಕ ಚಿಕ್ಕಹನುಮಯ್ಯರನ್ನು ಅಮಾನತು ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!