ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಪೊನ್ನಕುಡಿ ಬಳಿ ನಿನ್ನೆ ರಾತ್ರಿ ಕ್ವಾರಿಯಲ್ಲಿ ಕೆಲಸ ಮಾಡುವ ವೇಳೆ ದೈತ್ಯಾಕಾರದ ಕಲ್ಲು ಬಿದ್ದ ಪರಿಣಾಮ ಆರು ಮಂದಿ ಕಾರ್ಮಿಕರು ಸಿಲುಕಿದ್ದಾರೆ. ಅದರಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ನಾಲ್ವರು ಇನ್ನೂ ಕ್ವಾರಿಯಲ್ಲಿ ಸಿಲುಕಿಕೊಂಡಿದ್ದಾರೆ.
ರಕ್ಷಣಾ ಕಾರ್ಯಾಚರಣೆಗಾಗಿ ಅರಕ್ಕೋಣಂನಿಂದ ಎರಡು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡಗಳನ್ನು ಕರೆಸಲಾಗಿದೆ.
ಹಲವು ಗಂಟೆಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಅವಶೇಷಗಳಡಿ ಸಿಲುಕಿರುವವರ ಸ್ಥಿತಿಯ ಬಗ್ಗೆ ಮಾಹಿತಿ ಅಸ್ಪಷ್ಟವಾಗಿದೆ. ನೆಲ್ಲೈ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸರವಣನ್ ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದ್ದಾರೆ. ಅರಕ್ಕೋಣಂನಿಂದ 4 ಬೆಟಾಲಿಯನ್ನ 30 ಸಿಬ್ಬಂದಿ ಒಳಗೊಂಡಿರುವ ಎನ್ಡಿಆರ್ಎಫ್ ತಂಡ ಕಾರ್ಯಾಚರಣೆ ನಡೆಸುತ್ತಿದೆ.