ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣ ಹಾಗೂ ಆಂಧ್ರ ಪ್ರದೇಶ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಹೈದರಾಬಾದ್ನಲ್ಲಿ ನಕಲಿ ಬಾಂಬ್ ಬ್ಲಾಸ್ಟ್ ಮಾಡಲು ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.
ವಿಜಯನಗರದ ಸಿರಾಜ್ ಮತ್ತು ಹೈದರಾಬಾದ್ನ ಸಮೀರ್ ಬಂಧಿತರು. ಯೋಜನೆಯ ಭಾಗವಾಗಿ ಸಿರಾಜ್ ವಿಜಯನಗರದಲ್ಲಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿದ್ದ. ಸೌದಿ ಅರೇಬಿಯಾ ಮೂಲದ ಐಸಿಸ್ ಮಾಡ್ಯೂಲ್ ಇವರಿಗೆ ಹೈದರಾಬಾದ್ನಲ್ಲಿ ದಾಳಿ ನಡೆಸಲು ಮಾರ್ಗದರ್ಶನ ನೀಡುತ್ತಿದ್ದ.
ಆಂಧ್ರಪ್ರದೇಶದ ವಿಜಯನಗರದಲ್ಲಿ ಸಿರಾಜ್ನನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ಇನ್ನೋರ್ವ ಶಂಕಿತ ಉಗ್ರನ ಬಗ್ಗೆ ಸಿರಾಜ್ ಬಾಯ್ಬಿಟ್ಟಿದ್ದಾನೆ. ಬಳಿಕ ಪೊಲೀಸರು ಸಮೀರ್ನನ್ನು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಶಂಕಿತ ಉಗ್ರರು ಅಲ್ ಹಿಂದ್ ಇತ್ತೆಹಾದುಲ್ ಮುಸ್ಲಿಮೀನ್ ಸಂಘಟನೆ ನಡೆಸುತ್ತಿದ್ದರು. ಸಮೀರ್ ಇಂಜಿನಿಯರಿಂಗ್ ಮುಗಿಸಿ, ಲಿಫ್ಟ್ ಆಪರೇಟಿಂಗ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಶಂಕಿತರು ಬಾಸ್ಟ್ ಸಲುವಾಗಿ ಪೊಟ್ಯಾಸಿಯಮ್ ಕ್ಲೊರೇಡ್ ಹಾಗೂ ಸಲ್ಫರ್ನಂತಹ ರಾಸಾಯನಿಕಗಳನ್ನು ಆನ್ಲೈನ್ನಲ್ಲಿ ಆರ್ಡರ್ ಮಾಡಿದ್ದರು. ಈ ತಿಂಗಳು 21-22 ರಂದು ವಿಜಯನಗರ ಪ್ರದೇಶದಲ್ಲಿ ಪೂರ್ವಭ್ಯಾಸಕ್ಕೆ ತಯಾರಿ ಮಾಡಿಕೊಂಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.