ಹೊಸದಿಗಂತ ಡಿಜಿಟಲ್ ಡೆಸ್ಕ್
ಪಶ್ಚಿಮ ಬಂಗಾಳದ ಬಿರ್ಭೂಮ್ನಲ್ಲಿ ನಡೆಯುತ್ತಿರುವ ಹಿಂಸಾಚಾರ ದಿನದಿಂದ ದಿನಕ್ಕೆ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದೆ.
ಟಿಎಂಸಿ ಮುಖಂಡ ಭಡು ಶೇಕ್ ಹತ್ಯೆಗೆ ಪ್ರತಿಕಾರವಾಗಿ ಭುಗಿಲೆದ್ದ ಹಿಂಸಾಚಾರದಲ್ಲಿ 12ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಇಟ್ಟು ಮತ್ತು ಇಬ್ಬರು ಮಕ್ಕಳು ಸೇರಿ 8 ಮಂದಿಯನ್ನು ಈ ಬೆನ್ನಲ್ಲೇ ಹಿಂಸಾಚಾರ ಮುಂದುವರೆದಿದ್ದು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಟಿಎಂಸಿ ನಾಯಕರ ಹತ್ಯೆಗೆ ಯತ್ನಗಳು ನಡೆದಿದೆ.
ನಾದಿಯಾ ಪ್ರದೇಶದಲ್ಲಿ ಟಿಎಂಸಿ ಮುಖಂಡನೊಬ್ಬನ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿನಡೆಸಿದ್ದಾರೆ. ಸ್ಥಳೀಯ ಟಿಎಂಸಿ ಮುಖಂಡ ಸಹದೇವ್ ಮಂಡಲ್ ಎಂಬುವವರ ಮೇಲೆ ಗುಂಡಿನ ದಾಳಿ ನಡೆದಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಗುಂಡೇಟಿನಿಂದ ಗಾಯಗೊಂಡು ಬಿದ್ದಿದ್ದ ಸಹದೇವ್ರನ್ನು ಸ್ಥಳೀಯರು ಕೃಷ್ಣನಗರದಲ್ಲಿರುವ ಶಕ್ತಿ ನಗರ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇನ್ನೊಂದು ಘಟನೆಯಲ್ಲಿ ಟಿಎಂಸಿ ನಾಯಕಿ ಹಾಗೂ ಹೂಗ್ಲಿಯ ತಾರಕೇಶ್ವರದ ನೂತನ ಕೌನ್ಸಿಲರ್ ಆದ ರೂಪಾ ಸರ್ಕಾರ್ ಅವರ ಮೇಲೆ ದಾಳಿಯತ್ನ ನಡೆದಿದೆ. ಬುಧವಾರ ಮಧ್ಯರಾತ್ರಿ ರೂಪಾ ಮನೆಗೆ ಮರಳುತ್ತಿದ್ದಾಗ ಅವರ ಸ್ಕೂಟರ್ ನ ಹಿಂಬದಿಗೆ ಮಾರುತಿ ಕಾರನ್ನು ಡಿಕ್ಕಿ ಹೊಡೆಸುವ ಮೂಲಕ ದುಷ್ಕರ್ಮಿಗಳು ಅವರ ಹತ್ಯೆಗೆ ಯತ್ನಿಸಿದ್ದಾರೆ. ರೂಪಾ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ದುಷ್ಕರ್ಮಿಗಳು ತಮ್ಮ ಹತ್ಯೆಗೆ ಯತ್ನಿಸಿದ್ದಾರೆ ಎಂದು ರೂಪಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ