ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣಾ ಆಯೋಗದ ಸೂಚನೆಯಂತೆ ಭಾರತ್ ಗೌರವ್ ಕಾಶಿ ದರ್ಶನ ವಿಶೇಷ ರೈಲುಗಳ ಎರಡು ಪ್ರವಾಸವನ್ನು ರದ್ದುಗೊಳಿಸಲಾಗಿದೆ.
ಕರ್ನಾಟಕಕ್ಕೆ ಚುನಾವಣಾ ಆಯೋಗ ಸೂಚನೆ ನೀಡಿದ್ದು, ಏ.14 ಹಾಗೂ 28ರಂದು ನಿಗದಿಯಾಗಿದ್ದ ಎರಡು ಪ್ರವಾಸವನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಮಾ.25ರಿಂದ ಬುಕ್ಕಿಂಗ್ ಸ್ವೀಕರಿಸಲು ಆರಂಭವಾಗಿದ್ದ ಯಾತ್ರೆ ಇದೀಗ ರದ್ದಾಗಿದೆ.
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ವಾರಣಾಸಿ, ಅಯೋಧ್ಯೆ ಹಾಗೂ ಪ್ರಯಾಗ್ರಾಜ್ಗೆ ರೈಲು ಓಡಿಸಲು ಅನುಮತಿ ಕೋರಿ ಚುನಾವಣಾ ಆಯೋಗವನ್ನು ಸಂಪರ್ಕಿಸಲಾಗಿತ್ತು. ಆದರೆ ಚುನಾವಣಾ ಆಯೋಗ ಈ ಕೂಡಲೇ ಪ್ರವಾಸಗಳ ಬುಕ್ಕಿಂಗ್ ನಿಲ್ಲಿಸುವಂತೆ ಹಾಗೂ ಎರಡು ಬ್ಯಾಚ್ ಟ್ರಿಪ್ನ್ನು ರದ್ದು ಮಾಡುವಂತೆ ಸೂಚನೆ ನೀಡಿದೆ.
ನವೆಂಬರ್ನಲ್ಲಿ ಪ್ರಧಾನಿ ಮೋದಿ ಭಾರತ್ ಗೌರವ್ ಟೂರಿಸ್ಟ್ ರೈಲಿಗೆ ಚಾಲನೆ ನೀಡಿದ್ದು, ರಾಜ್ಯ ಸರ್ಕಾರ ಐಆರ್ಸಿಟಿಸಿ ಜತೆ ಒಪ್ಪಂದ ಮಾಡಿಕೊಂಡಿತ್ತು.