ಹೊಸ ದಿಗಂತ ವರದಿ,ವಿಜಯಪುರ:
ಸಾರಿಗೆ ಬಸ್ ಹಾಯ್ದು ಎರಡು ವರ್ಷದ ಬಾಲಕ ಮೃತಪಟ್ಟ ಹೃದಯವಿದ್ರಾವಕ ಘಟನೆ ವಿಜಯಪುರ ತಾಲೂಕಿನ ಕುಮಟಗಿ ಬಸ್ ಸ್ಟಾಪ್ ಬಳಿ ನಡೆದಿದೆ.
ಇಲ್ಲಿನ ರಾಘವೇಂದ್ರ ತಳವಾರ (2) ಮೃತ ಬಾಲಕ.
ಈ ದುರ್ಘಟನೆಯಿಂದ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನಾ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದರು.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

