ಗಣಪತಿ ಮೂರ್ತಿ ತರಲು ಹೊರಟಿದ್ರು.. ಟಾಟಾ ಏಸ್‌ ಪಲ್ಟಿಯಾಗಿ ಇಬ್ಬರು ಯುವಕರ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಗಣಪತಿ ತರಲು ಹೋಗುತ್ತಿದ್ದಾಗ ಆಟೋ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ.

ಲಿಂಗದಹಳ್ಳಿ ನಿವಾಸಿಗಳಾದ ಶ್ರೀಧರ್ (20) ಹಾಗೂ ಧನುಷ್ (20) ಮೃತ ಯುವಕರು ಎಂದು ಗುರುತಿಸಲಾಗಿದೆ

ಲಿಂಗನಹಳ್ಳಿ ಪಟ್ಟಣದ 9 ಜನ ಯುವಕರು ಬೆಳಗ್ಗೆ ಏಳು ಗಂಟೆಗೆ ಗಣಪತಿ ತರಲೆಂದು 15 ಕಿ.ಮೀ. ದೂರದ ತರೀಕೆರೆ ಪಟ್ಟಣಕ್ಕೆ ಟಾಟಾ ಏಸ್ ಲಾಗೇಜ್ ಆಟೋದಲ್ಲಿ ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ

ಟಾಟಾ ಏಸ್ ಬಿದ್ದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್  ಆಸ್ಪತ್ರೆಗೆ ರವಾನಿಸಲಾಗಿದೆ. ಆಟೋದಲ್ಲಿದ್ದ ಇನ್ನಿತರ ಮೂರು ಯುವಕರಿಗೂ ಗಂಭೀರ ಗಾಯಗಳಾಗಿವೆ. ಅವರನ್ನು ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!