ಹೊಸ ದಿಗಂತ ವರದಿ, ಹಾಸನ :
ಸಕಲೇಶಪುರ ತಾಲ್ಲೂಕಿನ ಬಾಗೆ ಗ್ರಾಮದ ಬಳಿ ಭಾರಿ ಮಳೆಯಿಂದ ರಸ್ತೆ ಕಾಣದೆ ಕಾರೊಂದು ಕಬ್ಬಿಣದ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿ ಧಾರುಣ ಸಾವನ್ನಪಿದ್ದಾರೆ.
ಬೆಂಗಳೂರು ಮೂಲದ ಅಭಿಷೇಕ್ (27), ಶರತ್ (28) ಮೃತ ಯುವಕರು. KA-03-AK-5325 ನಂಬರ್ನ ಎರಿಟಿಗಾ ಕಾರಿನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ನಾಲ್ವರು ಯುವಕರು, ಮಳೆಯಿಂದ ರಸ್ತೆ ಕಾಣದೆ ಬಾಗೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಕಬ್ಬಿಣದ ಡಿವೈಡರ್ಗೆ ಡಿಕ್ಕಿ ಹೊಡೆಡಿದ್ದಾರೆ. ಅಪಘಾತದಲ್ಲಿ ಸಂಭವಿಸಿದ ಸ್ಥಳದಲ್ಲೇ ಇಬ್ಬರು ಯುವಕರು ಧಾರುಣ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಇನ್ನಿಬ್ಬರು ಯುವಕರಿಗೆ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ಧನಂಜಯ, ಸಂದೀಪ್ಗೆ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.