ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತ್ಯು

ಹೊಸದಿಗಂತ ಯಾದಗಿರಿ:

ಕೃಷ್ಣಾ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಯುವಕರಿಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾ ಸಮೀಪದ ಬೆಂಚಿ ಗಡ್ಡಿಯ ಹತ್ತಿರವಿರುವ ಪಿಪಿಸಿಎಲ್ ವಿದ್ಯುತ್ ಪೂರೈಕೆ ಘಟಕದಲ್ಲಿ ಕೆಲಸಕ್ಕಿದ್ದ ನಾಗಾಲ್ಯಾಂಡ್ ಮೂಲದ ಅಲಾಮ (23) ಹಾಗೂ ಬಿಜಾಪುರ ಜಿಲ್ಲೆಯ ಮುತ್ತಗಿ ಗ್ರಾಮದ ಶಿವಪ್ಪ ಸೂರ್ಯವಂಶಿ (24) ಎನ್ನುವ ಇಬ್ಬರು ಯುವಕರು ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ವಿದ್ಯುತ್ ಉತ್ಪಾದನೆ ಘಟಕದ ನೀರಿನಲ್ಲಿ ಈಜಲು ತೆರಳಿ ಇಬ್ಬರು ಯುವಕರು ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ಮೃತ ದೇಹಗಳನ್ನು ಹೊರಗೆ ತೆಗೆದಿದ್ದಾರೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಕೊಡೆಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!