ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮಾಜಿ ಸಿಎಂ ಬಿಎಸ್‌ವೈಗೆ ಮನವಿ ಸಲ್ಲಿಸಿದ ಯುಕೊ ನಿಯೋಗ

ಹೊಸಿದಗಂತ ವರದಿ, ಕೊಡಗು:

ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಂತೆ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರ ನೇತೃತ್ವದಲ್ಲಿ ಯುನೈಟೆಡ್ ಕೊಡವ ಆರ್ಗನೈಝೇಷನ್ (ಯುಕೊ)ಸಂಘಟನೆಯ ನಿಯೋಗ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಅವರನ್ನು ಭೇಟಿ ಮಾಡಿ ಚರ್ಚಿಸಿತು.
ಯಡಿಯೂರಪ್ಪ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿಯಾದ ಪ್ರಮುಖರು, ಮುಂದಿನ ಮುಂಗಡ ಪತ್ರದಲ್ಲಿ ” ಕೊಡವ ಅಭಿವೃದ್ಧಿ ನಿಗಮ”ವನ್ನು ಘೋಷಿಸಲು ಸರಕಾರದ ಮಟ್ಟದಲ್ಲಿ ಮಾತುಕತೆ ನಡೆಸುವಂತೆ ಮನವಿ ಸಲ್ಲಿಸಿದರು.
ನಿಯೋಗದ ಬೇಡಿಕೆಗೆ ಮಾಜಿ ಮುಖ್ಯಮಂತ್ರಿಗಳು ಸಕರಾತ್ಮಕವಾಗಿ ಸ್ಪಂದಿಸಿರುವುದಾಗಿ ಯುಕೋ ಸಂಘಟನೆಯ ಮುಖಂಡ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!