ಹೊಸದಿಗಂತ ಡಿಜಿಟಲ್ ಡೆಸ್ಕ್:
ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಪೋಸ್ಟ್ ಹಂಚಿಕೊಂಡ ಕಾರಣಕ್ಕೆ ರಾಜಸ್ಥಾನದ ಕನ್ಹಯ್ಯ ಲಾಲ್ ನ ಶಿರಚ್ಛೇದ ಮಾಡಿದ ಹಂತಕರಾದ ಗೌಸ್ ಮಹಮ್ಮದ್ ಮತ್ತು ರಿಯಾಜ್ ಅಖ್ತರ್ ನಗರದಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಅವರನ್ನು ಬೆನ್ನಟ್ಟಿ ಹಿಡಿಡಿದ್ದು, ಇದೀಗ ಇದರ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.
ಟೈಲರ್ ಕನ್ಹಯ್ಯಾ ಲಾಲ್ರನ್ನು ರಚ್ಛೇದಿಸಿ, ಪ್ರಧಾನಿ ಮೋದಿಯನ್ನೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ವಿಡಿಯೋ ಹರಿಬಿಟ್ಟ ಹಂತಕರು, ಬೈಕ್ ಮೇಲೆ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.
राजस्थान पुलिस ने उदयपुर हत्याकांड के दोनों हत्यारों को पकड़ लिया हैं ।
राजस्थान पुलिस ने मौक़े पर ही खातिरदारी की है। अभी और भी ख़ातिरदारी होनी है।
यह कांग्रेस शासित राजस्थान हैं यहाँ असामाजिक तत्व बिल्कुल भी बर्दाश्त नहीं किये जायेगे।#Udaipur pic.twitter.com/kBflQ0qzdB
— Nitin Agarwal (@nitinagarwalINC) June 28, 2022
ಉದಯಪುರ ಹೊರವಲಯದ ಹೆದ್ದಾರಿಯಲ್ಲಿ ಹೆಲ್ಮೆಟ್ ಧರಿಸಿ ವೇಗವಾಗಿ ಹೋಗುತ್ತಿದ್ದ ಬೈಕ್ ಅನ್ನು ಚೆಕ್ಪೋಸ್ಟ್ನಲ್ಲಿ ಕಣ್ಗಾವಲು ಕಾಯುತ್ತಿದ್ದ ಪೊಲೀಸರು ತಡೆಯಲು ಮುಂದಾದಾಗ, ನಿಲ್ಲಿಸದೇ ಅತಿವೇಗವಾಗಿ ಹೋಗಿದ್ದಾರೆ. ಈ ವೇಳೆ ಪೊಲೀಸ್ ತಂಡ ಅವರನ್ನು ಬೆನ್ನಟ್ಟಿ ಹೋಗಿ ಹಿಡಿದಿದ್ದು, ಇದನ್ನು ಯಾರೋ ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ.
ಪರಿಹಾರ ಘೋಷಣೆ:
ಹತ್ಯೆಯಾದ ದರ್ಜಿ ಕನ್ಹಯ್ಯಾ ಲಾಲ್ ಕುಟುಂಬಕ್ಕೆ ರಾಜಸ್ಥಾನ ಸರ್ಕಾರ 31 ಲಕ್ಷ ರೂಪಾಯಿ ಪರಿಹಾರ ಮತ್ತು ಇಬ್ಬರು ಪುತ್ರರಿಗೆ ಸರ್ಕಾರಿ ಉದ್ಯೋಗ ಘೋಷಿಸಿದೆ.