ಉದಯಪುರ ಹಿಂದು ಹತ್ಯೆ: ಆರೋಪಿಗಳ ವಿರುದ್ಧ UAPA ಅಡಿ ಕೇಸ್ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನೂಪುರ್ ಶರ್ಮಾ ಬೆಂಬಲಿಸಿದ್ದ ಉದಯಪುರದಲ್ಲಿ ವ್ಯಕ್ತಿಯ ಶಿರಚ್ಛೇದ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿತರಾಗಿರುವ ಇಬ್ಬರು ಆರೋಪಿಗಳ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲಾಗಿದೆ.
ಹತ್ಯೆ ಪ್ರಕರಣದ ಜವಾಬ್ದಾರಿಯನ್ನು ಎನ್ ಐ ಎ ಗೆ ವಹಿಸಲಾಗಿದೆ. ಬಂಧಿತ ಮುಹಮ್ಮದ್ ಗೌಸ್ ಹಾಗೂ ಮುಹಮ್ಮದ್ ರಿಯಾಜ್ ಅಟ್ಟಾರಿ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲಿಸಲಾಗಿದೆ.
ಇನ್ನು ಆರೋಪಿಗಳಿಗೆ ಪಾಕಿಸ್ತಾನದ ಲಿಂಕ್ ಇರುವ ನಿಟ್ಟಿನಲ್ಲಿಯೇ ತನಿಖೆ ನಡೆಸಲಾಗುತ್ತಿದೆ ಎಂದು ರಾಜಸ್ಥಾನ ಡಿಜಿಪಿ ಮೋಹನ್ ಲಾಲ್ ತಿಳಿಸಿದ್ದಾರೆ. ಆರೋಪಿಗಳಿಗೆ ಪಾಕಿಸ್ತಾನದ ಜತೆ ಸಂಪರ್ಕವಿದೆ ಎಂಬ ಬಗ್ಗೆ ಮಾಹಿತಿ ಇದೆ. ಇದು ಭಯೋತ್ಪದಕ ಕೃತ್ಯ ಎಂದೇ ಪರಿಗಣಿಸಲಾಗಿದೆ ಎಂದು ತಿಳಿಸಿದರು.
ಪ್ರಕರಣ ಸಂಬಂಧ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ದೆಹಲಿ, ಮುಂಬೈ, ಕಾನ್ಪುರದಲ್ಲಿ ದಾವತ್-ಎ-ಇಸ್ಲಾಮಿ ಸಂಘಟನೆ ಸಕ್ರಿಯವಾಗಿದೆ ಎಂದು ಡಿಜಿಪಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!